top of page
  • Writer's pictureDoubleClickMedia

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು,ಜೂ.20: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ ಪದವಿ/ ಸ್ನಾತಕತ್ತೋತರ ಪದವಿ/ ಮೆಡಿಕಲ್/ ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ, ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Application for scholarship

ಅರ್ಹರು ವೆಬ್‍ಸೈಟ್: www.tw.kar.nic.in ಮೂಲಕ 2023ರ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು (ಗ್ರೇಡ್-1&2), ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಕಚೇರಿ ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Comments


bottom of page