top of page
  • Writer's pictureDoubleClickMedia

ರಾಜ್ಯದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ


Madraseye

ಬೆಂಗಳೂರು ಜು.31: ಪಿಂಕ್‌ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದು, ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.



ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.


ಮದ್ರಾಸ್ ಐ ರೋಗದ ಲಕ್ಷಣಗಳು:


*ಕಣ್ಣು ಕೆಂಪಾಗುವುದು, ನೀರು ಸೋರುವಿಕೆ


*ಅತಿಯಾದ ಕಣ್ಣೀರು


*ಕಣ್ಣಿನಲ್ಲಿ ತುರಿಕೆ


*ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ



*ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು


*ದೃಷ್ಟಿ ಮಂಜಾಗುವುದು


*ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು


ಮದ್ರಾಸ್ ಐ ಬರದಂತೆ ತಡೆಯುವುದು ಹೇಗೆ ?


*ವೈಯಕ್ತಿಕವಾಗಿ ಸ್ವಚ್ಛತೆ ಗೆ ಆದ್ಯತೆ ಕೊಡಿ


*ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು.


*ಸೊಂಕಿತ ವ್ಯಕ್ತಿ ಬಳಸಿದ ಕರವಸ್ರ್ತ ಮತ್ತು ಇತರ ವಸ್ತುಗಳನ್ನು ಬಳಸಬಾರದು.


*ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು.


*ಸೊಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು


*ತೀವ್ರ ಸೊಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು


ರೋಗ ಕಡಿಮೆಯಾಗಲು ಏನು ಮಾಡಬೇಕು ?


*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ


*ಸೊಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ.


*ಸೊಂಕಿತ ವ್ಯಕ್ತಿಗಳು ಪೌಷ್ಟಿಕ ಆಹಾರ ಸೇವಿಸಿ.


*ಸೊಂಕಿತ ವ್ಯಕ್ತಿಗಳು ಶುಚಿಯಾದ ಕರವಸ್ತ್ರ ಬಳಸಿ



ಏನು ಮಾಡಬಾರದು ?


*ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ.


*ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು.


*ಸೊಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ.


*ಸೊಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಬಳಸುವುದು.




Comentários


bottom of page