top of page
  • Writer's pictureDoubleClickMedia

ದಕ್ಷಿಣ ಕನ್ನಡ: ಜಿಲ್ಲೆಯ 16 ಕಡೆ NIA ದಾಳಿ

ಮೇ,31,2023:

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಿತ PFI ಗೆ ಸಂಬಂಧಿಸಿದ 16 ಸ್ಥಳಗಳ ಮೇಲೆ NIA ಬುಧವಾರ ದಾಳಿ ನಡೆಸಿದೆ

NIA officials
Representational Image

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ಸಹಾಯದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ 16 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಬಂಟ್ವಾಳ, ಉಪ್ಪಿನಂಗಡಿ, ವೇಣೂರು, ಬೆಳ್ತಂಗಡಿಯಲ್ಲಿ ಮನೆ, ಅಂಗಡಿ, ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಶೋಧ ನಡೆಸಲಾಗಿದೆ.


ಈ ದಾಳಿಗಳು ನಿರ್ದಿಷ್ಟವಾಗಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳ ಮೇಲೆ ಕೇಂದ್ರೀಕೃತವಾಗಿವೆ. ವರದಿಗಳ ಪ್ರಕಾರ, ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳನ್ನು ಬೆಂಬಲಿಸುವ ಉದ್ದೇಶದಿಂದ ಗಲ್ಫ್ ರಾಷ್ಟ್ರಗಳಿಂದ ಕರ್ನಾಟಕಕ್ಕೆ ಹರಿದುಬರುವ ಧನಸಹಾಯದ ಬಗ್ಗೆ ಎನ್ಐಎ ಮಾಹಿತಿಯನ್ನು ಪಡೆದುಕೊಂಡಿದೆ. ಶೋಧದ ವೇಳೆ ಹಣದ ವಹಿವಾಟಿಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಎನ್‌ಐಎ ಸಂಗ್ರಹಿಸಿದೆ.


ಈ ಹಿಂದೆ ಎನ್‌ಐಎ ಮಾರ್ಚ್ 2022 ರಲ್ಲಿ ಕರಾವಳಿ ಜಿಲ್ಲೆಯಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳ ಹಣದ ಮೂಲಗಳನ್ನು ಪತ್ತೆಹಚ್ಚಲು ಶೋಧ ನಡೆಸಿತ್ತು. ಈ ಶೋಧಕಾರ್ಯ ಜುಲೈ 12, 2022 ರಂದು ಬಿಹಾರದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ಮಾಡಲು PFI ನ ಸಂಚು ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿವೆ.


NIA ಯ ಈಗಿನ ದಾಳಿಗಳು ಭಯೋತ್ಪಾದಕ ಜಾಲಗಳನ್ನು ಕಿತ್ತೊಗೆಯಲು ಮತ್ತು ಅವರ ಆರ್ಥಿಕ ವ್ಯವಸ್ಥೆಗಳನ್ನು ದಮನಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿದೆ.

Comments


bottom of page