top of page
  • Writer's pictureDoubleClickMedia

ಸ್ಟೋರಿ ಆಫ್ ಸೌಜನ್ಯ: ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ?


 Soujanyacase

ನೈಜ ಘಟನೆಯಾಧಾರಿತ ಸಿನಿಮಾಗಳು ಸಾಕಷ್ಟಿವೆ. ಅಪಹರಿಸಲಾದ ಹಾಗೂ ಅತ್ಯಾಚಾರಕ್ಕೊಳಗಾದ ಎಷ್ಟೋ ಮಹಿಳೆಯರ ನೊಂದ ಕಥೆಗಳನ್ನು ಸಿನಿಮಾ ಮಾಡಲಾಗಿದೆ. ಇದೀಗ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.



ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ ಎಂದು ಹೇಳಲಾಗುತ್ತಿದೆ.



ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಆಕೆಯನ್ನು 2012 ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಕದಲ್ಲಿ ಆಕೆಯ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದ್ದು, ಇದೀಗ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.




Comments


bottom of page